ರಾಷ್ಟ್ರೀಯ ಚಳವಳಿಯ ಕಾವು ಕತೆಯ ಮೂರನೇ ತಲೆಮಾರಿನ ಚಿತ್ರಣದಲ್ಲಿ ಕಾಣಿಸಿಕೊಂಡಿದೆಯಲ್ಲದೆ, ಈ ಚಳವಳದಲ್ಲಿ ಪಾಲುಗೊಂಡಿದ್ದ ಕಾರಂತರು ತಾವೇ ಒಂದು ಪ್ರಮುಖ ಪಾತ್ರವಾಗಿ ಕಾಣಿಸಿಕೊಂಡಿದ್ದಾರೆ. ಬಡತನ, ಕೌಟುಂಬಿಕ ಸಂಕಟಗಳ ನಡುವೆಯೂ ಜೀವನದ ಇತ್ಯಾತ್ಮಕ ಮೌಲ್ಯಗಳನ್ನೇ ಬಾಳಿನ ಸಾರ್ಥಕತೆಯ ಸಾರಸರ್ವಸ್ವವೆಂದು ನಂಬಿ ಬಾಳಿದ ಮನುಷ್ಯ ಜೀವಿಗಳ ಹೋರಾಟ, ಆಧುನಿಕ ಜೀವನದ ಶೋಕಿಗೆ ಮರುಳಾಗಿ ಅನೈತಿಕ ನಡತೆಗಳಿಂದ ಬದುಕನ್ನು ಸಾಗಿಸಿ, ಬಿರುಗಾಳಿಗೆ ಸಿಲುಕಿದ ಹಡಗಿನಂತೆ – ಹೊಯ್ದಾಟದ ದುರಂತ ಜೀವನಕ್ಕೆ ತುತ್ತಾದ ವ್ಯಕ್ತಿಗಳ ಕತೆ, ರಾಷ್ಟ್ರೀಯ ಚಳವಳಿಯ ಅಲೆಯಲ್ಲಿ ಎಲ್ಲೆಲ್ಲೋ ಕೊಚ್ಚಿಕೊಂಡು ಹೋಗಿ, ಗುರಿಸಾಧಿಸಲು ವಿಫಲನಾಗಿ, ಕೊನೆಗೂ ಹುಟ್ಟಿದ ನೆಲಕ್ಕೆ ಮರಳಿಬಂದು, ದುಡಿದು ಜೀವಿಸಲು ನಿರ್ಧರಿಸಿದ ಕಥಾನಾಯಕ ರಾಮನ ಕಥೆಯೆ ಈ ಕಾದಂಬರಿ.











Reviews
There are no reviews yet.